ಒಂದೇ ಕ್ಲಿಕ್ ನಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ ಕುರಿತು ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಕೇವಲ ಒದೆರಡು ಕ್ಲಿಕ್ ನಲ್ಲಿ ಸುಲಭವಾಗಿ ಈ ಯೋಜನೆಯ ಅರ್ಜಿಯ ಇ-ಕೆವೈಸಿ ಸ್ಥಿತಿ ಮತ್ತು ಹಣ ಜಮಾ ವಿವರವನ್ನು ಪಡೆಯಲು ಮೊಬೈಲ್ ಅಪ್ಲಿಕೇಶನ್(PM-Kisan App) ಅನ್ನು ಕೇಂದ್ರದ ಕೃಷಿ ಇಲಾಖೆಯಿಂದ ಬಿಡುಗಡೆಗೊಳಿಸಲಾಗಿದೆ. ಪಿ ಎಂ ಕಿಸಾನ್ ಯೋಜನೆಯ(PM-Kisan) ಅರ್ಜಿಯ ಸ್ಥಿತಿ ಕುರಿತು ಮಾಹಿತಿಯನ್ನು ಪಡೆಯಲು ಯಾವುದೇ ಸರಕಾರಿ ಕಚೇರಿಯನ್ನು ಭೇಟಿ ಮಾಡದೇ ಈ ಒಂದು ಮೊಬೈಲ್ ಅಪ್ಲಿಕೇಶನ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿಯ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ. ಈ ಅಂಕಣದಲ್ಲಿ ಪಿಎಂ ಕಿಸಾನ್ ಮೊಬೈಲ್ ಅಪ್ಲಿಕೇಶನ್(Kisan samman nidhi) ಅನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ತಿಳಿಯುವುದು ಹೇಗೆ? ಮತ್ತು ಈ ಅಪ್ಲಿಕೇಶನ್ ನಲ್ಲಿ ಯಾವೆಲ್ಲ ಮಾಹಿತಿಯನ್ನು ಪಡೆಯಬಹುದು? …

Read more

ರೈತರಿಗೆ ಖುಷಿ ಸುದ್ದಿ- ಈಗ ಕ್ರೆಡಿಟ್‌ ಕಾರ್ಡ್‌ ಸಾಲದ ಮಿತಿಯಲ್ಲಿ ಭಾರೀ ಏರಿಕೆ, ಎಷ್ಟು ಗೊತ್ತೇ?

ಬಹುನಿರೀಕ್ಷೆಯ ಕೇಂದ್ರ ಬಜೆಟ್ 2025 ಮಂಡನೆ ಆರಂಭಿಸಿದ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ರೈತರಿಗೆ ಆದ್ಯತೆ ನೀಡಿದ್ದಾರೆ. ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಮೇಲಿನ ಸಾಲದ ಮಿತಿಯನ್ನು ರೂ.5 ಲಕ್ಷಕ್ಕೆ ಹೆಚ್ಚಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ದೇಶದ ರೈತರಿಗೆ ಮಹತ್ವದ ಮತ್ತು ಸಿಹಿ ಸುದ್ದಿಯೊಂದನ್ನು ಅವರು ನೀಡಿದ್ದಾರೆ. ಪ್ರಸ್ತುತದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್‌ನಿಂದ ರೈತರು ಗರಿಷ್ಠ ವಾಗಿ 3 ಲಕ್ಷ ರೂಪಾಯಿಗಳನ್ನು ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹದಾಗಿದೆ. ಆದರೆ ಈಗ ಅದರ ಪ್ರಮಾಣ ಲಕ್ಷಕ್ಕೆ ಹೆಚ್ಚಿಸುವುದಾಗಿ ವಿತ್ತ ಸಚಿವೆ ತಿಳಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶವಾಗುತ್ತಿದ್ದಂತೆ ಕಿಸಾನ್ ಕಾರ್ಡ್ ಹೊಂದಿರುವ ದೇಶದ ರೈತರು ಗರಿಷ್ಠ 5ಲಕ್ಷ ರೂಪಾಯಿ ಸಾಲ ಪಡೆಯಬಹುದಾಗಿದೆ. ಇದು ರೈತರಿಗೆ ಸಕಾಲಕ್ಕೆ ಹೆಚ್ಚಿನ ಆರ್ಥಿಕ ಸಹಾಯ ದೊರೆಯಲು …

Read more

ರೈತರಿಗಾಗಿ ‘ಧನ್‌ ಧಾನ್ಯ ಕೃಷಿ’ ಯೋಜನೆ ಘೋಷಿಸಿದ ಸೀತಾರಾಮನ್‌

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ, ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಿಸಿದ್ದಾರೆ. ಇದು ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ. ಶನಿವಾರ 2025-26ರ ಕೇಂದ್ರ ಬಜೆಟ್ ಮಂಡಿಸುತ್ತಾ, ‘ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ’ಯು ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ಎಂದು ಹೇಳಿದ್ದಾರೆ. ನಮ್ಮ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಕೈಗೊಳ್ಳಲಿದೆ. ಅಸ್ತಿತ್ವದಲ್ಲಿರುವ ಯೋಜನೆಗಳು ಮತ್ತು ವಿಶೇಷ ಕ್ರಮಗಳ ಒಮ್ಮುಖದ ಮೂಲಕ, ಈ ಕಾರ್ಯಕ್ರಮವು ಕಡಿಮೆ ಉತ್ಪಾದಕತೆ, ಮಧ್ಯಮ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ …

Read more

ಬೆಂಬಲ ಯೋಜನೆಯಡಿ ಕಡಲೆಕಾಳು ಖರೀದಿ, ರೈತರಿಗೆ ಮಾಹಿತಿ

ಕರ್ನಾಟಕ ಸರ್ಕಾರದ ಪ್ರಸ್ತಾವನೆಯಂತೆ ರಾಜ್ಯದಲ್ಲಿ 2024-25ರ ಹಿಂಗಾರು ಬೆಳೆ ಯೋಜನೆಯಡಿ ಕಡಲೇ ಕಾಳು ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಭಾರತ ಸರ್ಕಾರದ ಕೃಷಿ ಸಚಿವಾಲಯ 96,498 ಮೆಟ್ರಿಕ್ ಟನ್ ಕಡಲೇ ಕಾಳು ಖರೀದಿ ಮಾಡಲು ಅನುಮತಿ ನೀಡಿದ್ದು, ಬೆಂಬಲ ಬೆಲೆಯನ್ನು ಘೋಷಣೆ ಮಾಡಿದೆ. ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿನ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ ಮೂಲಕ ಖರೀದಿಸಲಾಗುತ್ತದೆ.ಕೇಂದ್ರ ಸರ್ಕಾರವು ಕಡಲೆಕಾಳು ಉತ್ಪನ್ನಕ್ಕೆ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್‌ಗೆ ರೂ. 5,650. ರೈತರಿಂದ ಈ ದರದಲ್ಲಿಯೇ ಖರೀದಿಸಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ. ಆಸಕ್ತ ಮತ್ತು ಅರ್ಹ ರೈತರು ಉತ್ಪನ್ನ ಮಾರಾಟ ಮಾಡಲು …

Read more

ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆಯಲ್ಲಿ ಕೃಷಿ ಯಾಂತ್ರೀಕರಣ, ತುಂತುರು ನೀರಾವರಿ ಘಟಕ, ಪಿವಿಸಿ ಪೈಪ್ ಹಾಗೂ ಕೃಷಿ ಭಾಗ್ಯ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿಭಾಗ್ಯ ಯೋಜನೆಯಲ್ಲಿ 10ಮೀಟರ್ ಉದ್ದ, 10ಮೀಟರ್ ಅಗಲ, 3 ಆಳ, 12ಮೀ. ಉದ್ದ 12 ಅಗಲ 3. ಆಳ, 15 ಮೀ.ಉದ್ದ 15 ಅಗಲ 3 ಆಳ, 18 ಮೀ.ಉದ್ದ, 18 ಅಗಲ, 3ಆಳ ಹಾಗೂ 21ಮೀ. ಉದ್ದ 21 ಅಗಲ 3ಆಳದ ಕೃಷಿ ಹೊಂಡ ನಿರ್ಮಾಣಕ್ಕೆ ನಿಗದಿಪಡಿಸಿದ ಅಂದಾಜು ಪಟ್ಟಿಯಂತೆ ಸಾಮಾನ್ಯ ವರ್ಗ ಫಲಾನುಭವಿಗಳಿಗೆ ಶೇ.80 ಹಾಗೂ ಪ.ಜಾತಿ ಮತ್ತು ಪ.ಪಂಗಡದವರಿಗೆ ಶೇ.90 ಸಹಾಯಧನ ದೊರೆಯಲಿದೆ. ತುಂತುರು ನೀರಾವರಿ ಘಟಕ ಯೋಜನೆಯಲ್ಲಿ 5 ಸ್ಪಿಂಕ್ಲರ್ ಸೆಟ್ ಹಾಗೂ 30 ಕಪ್ಪು ಪೈಪುಗಳನ್ನು ಎಲ್ಲಾ ವರ್ಗದ ರೈತರಿಗೆ …

Read more

ಶಿವಮೊಗ್ಗಕ್ಕೆ ಬಂಪರ್ ಕೊಡುಗೆ ಕೊಟ್ಟ ಕೇಂದ್ರ ಸರ್ಕಾರ

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆಯನ್ನು ನೀಡಿದೆ. ಇದರಿಂದಾಗಿ ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಮೆಕ್ಕೆಜೋಳ ಉತ್ಪಾದನೆಗೆ ಉತ್ತೇಜನ ದೊರಕಲಿದೆ. ಕೇಂದ್ರ ಸರ್ಕಾರ ಶಿವಮೊಗ್ಗದಲ್ಲಿ ಭಾರತೀಯ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಸ್ಥಾಪನೆಗೆ ಒಪ್ಪಿಗೆಯನ್ನು ನೀಡಿದೆ. ಕೇಂದ್ರ ಕೃಷಿ ಖಾತೆ ಸಚಿವರು ಈ ಕುರಿತು ಸಂಸದರಿಗೆ ಪತ್ರವನ್ನು ಬರೆದು ಮಾಹಿತಿ ನೀಡಿದ್ದಾರೆ. ‘ಶಿವಮೊಗ್ಗ ಜಿಲ್ಲೆಯಲ್ಲಿ ಕೇಂದ್ರದಿಂದ ಅನುಮತಿ ದೊರೆತಿದ್ದು, ನಗರದ ನವುಲೆಯ ಕೃಷಿ ವಿಶ್ವವಿದ್ಯಾಲಯದ 45 ಎಕರೆ ಜಾಗದಲ್ಲಿ ಈ ಕೇಂದ್ರ ಕಾರ್ಯನಿರ್ವಹಿಸಲಿದೆ’. ‘ಜಿಲ್ಲೆಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಯಿಂದ ಮೆಕ್ಕೆಜೋಳ ಉತ್ಪಾದನೆಗೆ ಉತ್ತೇಜನ ದೊರಕಲಿದೆ. ಮೆಕ್ಕೆಜೋಳಕ್ಕೆ ರೋಗಗಳು ಹೆಚ್ಚುತ್ತಿವೆ. ಆದ್ದರಿಂದ, ಇದರ ಸಂಶೋಧನೆ ಕೈಗೊಳ್ಳಲು ಅನುಕೂಲ ಆಗಲಿದೆ, ಇಲ್ಲಿ ನುರಿತ ವಿಜ್ಞಾನಿಗಳ ತಂಡ ಕಾರ್ಯನಿರ್ವಹಿಸಲಿದೆ. ಇದರಿಂದ, …

Read more

ತೆಂಗಿನ ಕಾಯಿ, ಎಳನೀರು ಕೊಯ್ಲು ಮಾಡುವವರಿಗೆ ವಿಮಾ ಯೋಜನೆ, ವಿವರಗಳು

ತುಮಕೂರು ಜಿಲ್ಲೆಯಲ್ಲಿನ ಪ್ರಮುಖ ಬೆಳೆ ತೆಂಗು. ತೆಂಗಿನ ಕಾಯಿ ಅಥವಾ ಎಳನೀರು ಕೊಯ್ಲು ಮಾಡುವ ಗೊನೆಗಾರರು ಅನೇಕ ಬಾರಿ ಅಪಘಾತಗಳಿಗೆ ತುತ್ತಾಗುತ್ತಾರೆ. ಇಂತಹ ಗೊನೆಗಾರರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ವಿಮಾ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ವಿಮಾ ಯೋಜನೆಯ ಮಾಹಿತಿ, ಬೇಕಾಗುವ ದಾಖಲೆಗಳ ಕುರಿತು ಮಾಹಿತಿಯನ್ನು ನೀಡಲಾಗಿದೆ. ‘ಗೊನೆಗಾರರಿಗೆ ಕೇರಾ ಸುರಕ್ಷಾ ವಿಮಾ ಯೋಜನೆ‘ ಎಂಬ ಹೆಸರಿನಲ್ಲಿ ತೆಂಗಿನ ಕಾಯಿ ಅಥವಾ ಎಳನೀರು ಕೊಯ್ಲು ಮಾಡುವ ಅನುಭವಿ ಗೊನೆಗಾರರಿಗೆ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಸುಲಭ ಕಂತುಗಳನ್ನು ಪಾವತಿ ಮಾಡುವ ಮೂಲಕ ಗೊನೆಗಾರರು ಈ ವಿಮಾ ಯೋಜನೆಯ ಸೌಲಭ್ಯವನ್ನು ಪಡೆಯಬಹುದಾಗಿದೆ. ವಿಮಾ ಯೋಜನೆಯ ಉದ್ದೇಶಗಳು: ಗೊನೆಗಾರರಿಗೆ ಕೇರಾ ಸುರಕ್ಷಾ ವಿಮಾ ಯೋಜನೆಯು ವೈಯಕ್ತಿಕ ಅಪಘಾತ ವಿಮಾ ಯೋಜನೆ ಆಗಿದ್ದು, ತೆಂಗು ಅಭಿವೃದ್ಧಿ ಮಂಡಳಿಯವರು ದಿ ನ್ಯೂ ಇಂಡಿಯಾ …

Read more

ಕೆಆರ್‌ಎಸ್‌ ಡ್ಯಾಂನಿಂದ ಕೃಷಿಗೆ ನೀರು, ವೇಳಾಪಟ್ಟಿ ಬಿಡುಗಡೆ

ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಆದ್ದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ (ಕೆಆರ್‌ಎಸ್) ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಜನವರಿಯಲ್ಲಿಯೂ ಸಹ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 124 ಅಡಿ ಇದೆ. ಇದರಿಂದಾಗಿ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ಅಲ್ಲದೇ ಕೃಷಿ ಚಟುವಟಿಕೆಗೆ ಸಹ ನೀರು ಸಿಗಲಿದೆ ಎಂದು ರೈತರು ಸಂತಸಗೊಂಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಎನ್. ಚಲುವರಾಯಸ್ವಾಮಿ, “ಕೆಆರ್‌ಎಸ್ ಡ್ಯಾಂನಿಂದ ಬೆಳೆಗಳಿಗೆ ಜನವರಿ 10 ರಿಂದ 18 ದಿನಗಳು ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗವುದು” ಎಂದು ಹೇಳಿದರು. ಕೃಷಿಗೆ ನೀರು ಬಿಡುಗಡೆ ವೇಳಾಪಟ್ಟಿ: ಎನ್. ಚಲುವರಾಯಸ್ವಾಮಿ ಮಾತನಾಡಿ, “ಜನವರಿ 10 ರಿಂದ 18 ದಿನಗಳ ಕಾಲ ನೀರು ಹರಿಸಲಾಗುವುದು. 12 ದಿನಗಳ ಕಾಲ ನೀರು ನಿಲುಗಡೆ ಇದೇ …

Read more

‘ಕುಸುಮ್ ಬಿ’ ಯೋಜನೆ ರೈತರು ಸೋಲಾರ್‌ ಪಂಪ್‌ ಅಳವಡಿಸಲು ಸಬ್ಸಿಡಿ

ಕರ್ನಾಟಕ ಸರ್ಕಾರ ಸೌರಶಕ್ತಿ ಬಳಕೆ ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ. ರೈತರು ಸೋಲಾರ್ ಪಂಪ್‌ಸೆಟ್ ಅಳವಡಿಕೆ ಮಾಡಿಕೊಳ್ಳಲು ‘ಕುಸುಮ್ ಬಿ’ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿ ರೈತರು ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್‌ಸೆಟ್ ಅಳವಡಿಕೆ ಮಾಡಿಕೊಳ್ಳಬಹುದು. ಇದರಿಂದಾಗಿ ಸಂಪ್ರದಾಯಿಕ ವಿದ್ಯುತ್ ಮೇಲಿನ ಅವಲಂಬನೆ ಕಡಿಮೆಯಾಗಲಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ 80ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ.ಕುಸುಮ್-ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್‌ಮರ್ಸಿಬಲ್/ ಸರ್ಫೇಸ್ ಡಿಸಿ ಪಂಪ್‌ಗಳು, ಮೌಂಟಿಂಗ್ ಸ್ಟ್ರಕ್ಚರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ.ಕೃಷಿ ಭೂಮಿಯಲ್ಲಿ ಅಳವಡಿಸಲಾಗುವ ಸೋಲಾರ್ ಪಂಪ್‌ಗಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ಉಚಿತವಾಗಿ ನಿರ್ವಹಣೆ ಮಾಡಲಿದ್ದಾರೆ. ಸೋಲಾರ್ ಪಂಪ್‌ಸೆಟ್ ಅಳವಡಿಸಲು ರಾಜ್ಯ ಸರ್ಕಾರದ ಸಹಾಯಧನ, ಕೇಂದ್ರ ಸರ್ಕಾರದ …

Read more

ರೈತರನ್ನು ಗೌರವಿಸಬೇಕು: ಸಿದ್ದಬಸಪ್ಪ

ರೈತರು ಬೆಳೆ ಬೆಳೆಯುವುದರಿಂದಲೇ ಮನುಜಕುಲ ಶಾಂತಿಯಿಂದ ಜೀವನ ನಡೆಸಲು ಸಾಧ್ಯ ಎಂದು ನಗರದ ಹೊಸ ಸೇತುವೆ ರಸ್ತೆ, ಸಿದ್ದಾರೂಢ ನಗರದಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಯ್ಯ ವಿದ್ಯಾ ಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸವ ಹೇಳಿದರು. ಅವರು ವಿದ್ಯಾಸಂಸ್ಥೆಯಲ್ಲಿ ಆಯೋಜಿಲಸಲಾಗಿದ್ದ ರೈತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅನ್ನ ನೀಡುವ ರೈತರನ್ನು ಪ್ರತಿಯೊಬ್ಬರು ಗೌರವಿ ಸುವುದು ಕರ್ತವ್ಯವಾಗಿದೆ ಎಂದರು. ಪ್ರಗತಿಪರ ರೈತರಾದ ಎ. ಪ್ರಕಾಶ್, ಅರಳಿಹಳ್ಳಿ ಹಾಗೂ ಜಿ.ಗೋಪಾಲ್ ತಳ್ಳಿಕಟ್ಟೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಗತಿಪರ ರೈತ ಪ್ರಕಾಶ್ ಅವರು, ಕೃಷಿಯ ಐತಿಹಾಸಿಕ ಹಿನ್ನೆಲೆ ಕೃಷಿ ಚಟುವಟಿಕೆಯ ಅದ್ಭುತಾವಕಾಶಗಳನ್ನು ಹೊಂದಿದೆ. ಕೃಷಿ ಕೇವಲ ಮನುಜಕುಲಕ್ಕೆ ಮಾತ್ರವಲ್ಲ, ಸಕಲ ಜೀವರಾಶಿಗಳಿಗೂ ಅಗತ್ಯ ಎಂದರು. ಗೋಪಾಲ್ ಅವರು ಕೃಷಿ …

Read more